Read Anywhere and on Any Device!

Subscribe to Read | $0.00

Join today and start reading your favorite books for Free!

Read Anywhere and on Any Device!

  • Download on iOS
  • Download on Android
  • Download on iOS

ಇಮ್ಮಡಿ ಮಡಿಲು | Immadi Madilu

K.N. Ganeshaiah
4.33/5 (12 ratings)
‘ಇಮ್ಮಡಿ ಮಡಿಲು’ ಕೆ.ಎನ್. ಗಣೇಶಯ್ಯ ಅವರ ಕಥಾಸಂಕಲನ. ಕ್ರಿ.ಶ. ಏಳನೇ ಶತಮಾನದಲ್ಲಿ ಚಾಲುಕ್ಯರ ಬಾದಾಮಿಯನ್ನು ಗೆದ್ದ ಪಲ್ಲವರ ಸೇನಾಧಿಪತಿ, ಅಲ್ಲಿನ ಅರಮನೆಯಿಂದ ತನ್ನ ರಾಜನಿಗೆ ಅಭಿಮಾನದಿಂದ ಕಳುಹಿಸಿದ ಎರಡು 'ರತ್ನ'ಗಳು ಕೊನೆಗೆ ಆತನಿಗೇ ಮುಳುವಾಗುತ್ತವೆ. ಆ ರತ್ನಗಳಿಂದಾಗಿ ತನ್ನ ಬದುಕಿನ ಕರಾಳ ರಹಸ್ಯವೊಂದರ ಪರಿಚಯವಾದಾಗ, ಸೇನಾಧಿಪತಿ, ಬಾದಾಮಿಯಿಂದಲೇ ತಂದ ಗಣೇಶನ ಮೂರ್ತಿಯಲ್ಲಿ ಮೊರೆ ಹೋಗಿ, ಸನ್ಯಾಸ ಜೀವನ ಸಾಗಿಸುತ್ತಾನೆ. ಆತನಿಗೆ ನೆಮ್ಮದಿ, ಶಾಂತಿ ನೀಡಿದ ಅದೇ ಗಣಪತಿ ಮೂರ್ತಿ, ಸಾವಿರ ವರ್ಷಗಳ ನಂತರ ಮುತ್ತುಸ್ವಾಮಿ ದೀಕ್ಷಿತರ 'ವಾತಾಪಿ ಗಣಪತಿಂ ಭಜೇ' ಕೀರ್ತನೆಗೂ ಸ್ಫೂರ್ತಿಯಾಗುತ್ತದೆ. ಈ ಘಟನೆಗಳ ಸುತ್ತ ಹೆಣೆದ ಚಾರಿತ್ರಿಕ ಕಥೆ 'ಇಮ್ಮಡಿ ಮಡಿಲು'.

ಜೊತೆಗೆ ಅಕ್ಕಮಹಾದೇವಿಯ ಪ್ರತಿರೂಪದಂತೆ ಬದುಕಿದ ಕಾಶ್ಮೀರದ ಒಬ್ಬ ಶಿವಭಕ್ತಿಯ ಜೀವನವನ್ನು ಅಧ್ಯಯನ ಮಾಡಲು ಸಂಶೋಧನಾ ವಿದ್ಯಾರ್ಥಿ ತಾನು ಕಂಡ ಸತ್ಯವನ್ನು ಹೊರಗೆಡಹಲು ಮುಂದಾದಾಗ, ಅದು ಅವಳ ಜೀವನಕ್ಕೆ ಕಂಟಕವಾಗುತ್ತದೆ. ಆ ಮೂಲಕ ಆಕೆ ಬೇರೊಂದು, 'ಪರ್ಯಾಯ' ಸತ್ಯವನ್ನು ಕಾಣತೊಡಗುತ್ತಾಳೆ. ಶತಮಾನಗಳಿಂದಲೂ ಯೆಹೂದಿಗಳಲ್ಲಿ ದೇಶಪ್ರೇಮ ಮತ್ತು ಹೋರಾಟದ ಸ್ಫೂರ್ತಿ ತುಂಬುತ್ತಿರುವ 'ಮಸಾದ' ಬೆಟ್ಟದ ಮೇಲಿನ ಸಾಮೂಹಿಕ ಹತ್ಯೆಯ ಚಾರಿತ್ರಿಕ ಘಟನೆಯ ಸುತ್ತ ಸಂಶಯದ ಸುಳಿಗಳು ಬೆಳೆದಂತೆ, ಆಕಸ್ಮಿಕವಾಗಿ ದೊರಕಿದ ಮಾಹಿತಿಯಿಂದ ಆ ಚರಿತ್ರೆಯ ಮತ್ತೊಂದು ಮುಖದ ಪರಿಚಯವಾಗುತ್ತದೆ.
Format:
Paperback
Pages:
150 pages
Publication:
2024
Publisher:
Ankitha Pustaka
Edition:
1st Edition
Language:
kan
ISBN10:
ISBN13:
kindle Asin:
B0DM4NGG9C

ಇಮ್ಮಡಿ ಮಡಿಲು | Immadi Madilu

K.N. Ganeshaiah
4.33/5 (12 ratings)
‘ಇಮ್ಮಡಿ ಮಡಿಲು’ ಕೆ.ಎನ್. ಗಣೇಶಯ್ಯ ಅವರ ಕಥಾಸಂಕಲನ. ಕ್ರಿ.ಶ. ಏಳನೇ ಶತಮಾನದಲ್ಲಿ ಚಾಲುಕ್ಯರ ಬಾದಾಮಿಯನ್ನು ಗೆದ್ದ ಪಲ್ಲವರ ಸೇನಾಧಿಪತಿ, ಅಲ್ಲಿನ ಅರಮನೆಯಿಂದ ತನ್ನ ರಾಜನಿಗೆ ಅಭಿಮಾನದಿಂದ ಕಳುಹಿಸಿದ ಎರಡು 'ರತ್ನ'ಗಳು ಕೊನೆಗೆ ಆತನಿಗೇ ಮುಳುವಾಗುತ್ತವೆ. ಆ ರತ್ನಗಳಿಂದಾಗಿ ತನ್ನ ಬದುಕಿನ ಕರಾಳ ರಹಸ್ಯವೊಂದರ ಪರಿಚಯವಾದಾಗ, ಸೇನಾಧಿಪತಿ, ಬಾದಾಮಿಯಿಂದಲೇ ತಂದ ಗಣೇಶನ ಮೂರ್ತಿಯಲ್ಲಿ ಮೊರೆ ಹೋಗಿ, ಸನ್ಯಾಸ ಜೀವನ ಸಾಗಿಸುತ್ತಾನೆ. ಆತನಿಗೆ ನೆಮ್ಮದಿ, ಶಾಂತಿ ನೀಡಿದ ಅದೇ ಗಣಪತಿ ಮೂರ್ತಿ, ಸಾವಿರ ವರ್ಷಗಳ ನಂತರ ಮುತ್ತುಸ್ವಾಮಿ ದೀಕ್ಷಿತರ 'ವಾತಾಪಿ ಗಣಪತಿಂ ಭಜೇ' ಕೀರ್ತನೆಗೂ ಸ್ಫೂರ್ತಿಯಾಗುತ್ತದೆ. ಈ ಘಟನೆಗಳ ಸುತ್ತ ಹೆಣೆದ ಚಾರಿತ್ರಿಕ ಕಥೆ 'ಇಮ್ಮಡಿ ಮಡಿಲು'.

ಜೊತೆಗೆ ಅಕ್ಕಮಹಾದೇವಿಯ ಪ್ರತಿರೂಪದಂತೆ ಬದುಕಿದ ಕಾಶ್ಮೀರದ ಒಬ್ಬ ಶಿವಭಕ್ತಿಯ ಜೀವನವನ್ನು ಅಧ್ಯಯನ ಮಾಡಲು ಸಂಶೋಧನಾ ವಿದ್ಯಾರ್ಥಿ ತಾನು ಕಂಡ ಸತ್ಯವನ್ನು ಹೊರಗೆಡಹಲು ಮುಂದಾದಾಗ, ಅದು ಅವಳ ಜೀವನಕ್ಕೆ ಕಂಟಕವಾಗುತ್ತದೆ. ಆ ಮೂಲಕ ಆಕೆ ಬೇರೊಂದು, 'ಪರ್ಯಾಯ' ಸತ್ಯವನ್ನು ಕಾಣತೊಡಗುತ್ತಾಳೆ. ಶತಮಾನಗಳಿಂದಲೂ ಯೆಹೂದಿಗಳಲ್ಲಿ ದೇಶಪ್ರೇಮ ಮತ್ತು ಹೋರಾಟದ ಸ್ಫೂರ್ತಿ ತುಂಬುತ್ತಿರುವ 'ಮಸಾದ' ಬೆಟ್ಟದ ಮೇಲಿನ ಸಾಮೂಹಿಕ ಹತ್ಯೆಯ ಚಾರಿತ್ರಿಕ ಘಟನೆಯ ಸುತ್ತ ಸಂಶಯದ ಸುಳಿಗಳು ಬೆಳೆದಂತೆ, ಆಕಸ್ಮಿಕವಾಗಿ ದೊರಕಿದ ಮಾಹಿತಿಯಿಂದ ಆ ಚರಿತ್ರೆಯ ಮತ್ತೊಂದು ಮುಖದ ಪರಿಚಯವಾಗುತ್ತದೆ.
Format:
Paperback
Pages:
150 pages
Publication:
2024
Publisher:
Ankitha Pustaka
Edition:
1st Edition
Language:
kan
ISBN10:
ISBN13:
kindle Asin:
B0DM4NGG9C